• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಣಿಕ್ ಸರ್ಕಾರ್ ಹಾಗೂ ಸಿಪಿಎಂ ವಿರುದ್ಧ ಬಿಜೆಪಿ ಬಿಡುಗಡೆಗೊಳಿಸಿದ ಕಿರು ಹೊತ್ತಗೆಯಲ್ಲಿ ಏನಿದೆ ಗೊತ್ತಾ?

TNN Correspondent Posted On February 10, 2018
0


0
Shares
  • Share On Facebook
  • Tweet It

ಅಗರ್ತಲಾ: ತ್ರಿಪುರ ರಾಜ್ಯದಲ್ಲಿ ಸಿಪಿಎಂ ಮುಕ್ತವಾಗಿಸಿ ಕಮಲ ಅರಳಿಸಲು ಸಜ್ಜಾಗಿರುವ ಬಿಜೆಪಿಯು ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಹಾಗೂ ಸಿಪಿಎಂನ ಕರಾಳ ಮುಖವನ್ನು ತೆರೆದಿಡುವ ಕಿರುಹೊತ್ತಗೆಯೊಂದನ್ನು ಬಿಡುಗಡೆ ಮಾಡಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕಾರ್ಯಕ್ರಮವೊಂದರಲ್ಲಿ “ಚಾರ್ಜ್ ಶೀಟ್ ಅಗೇನ್ಸ್ಟ್ ಸಿಪಿಎಂ” ಎಂಬ ಕಿರುಹೊತ್ತಗೆ ಬಿಡುಗಡೆಗೊಳಿಸಿದ್ದು, ಜನ ಬಿಜೆಪಿಗೇ ಮತ ಹಾಕಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಿರುಹೊತ್ತಗೆಯಲ್ಲಿ ಹುಸಿ ಆರೋಪ ಮಾಡದೆ, ಕಳೆದ 25 ವರ್ಷಗಳಲ್ಲಿ ತ್ರಿಪುರದಲ್ಲಿ ಸಿಪಿಎಂ ನಡೆಸಿದ ದುರಾಡಳಿತ, ಭ್ರಷ್ಟಾಚಾರ ಹಾಗೂ ಹಗರಣಗಳ ಕುರಿತ ಸಂಪೂರ್ಣ ಮಾಹಿತಿ ಕಿರು ಪುಸ್ತಕದಲ್ಲಿದೆ ಎಂದು ವಿವರಿಸಿದ್ದಾರೆ.

ಕಳೆದ 25 ವರ್ಷಗಳಿಂದ ರಾಜ್ಯವನ್ನಾಳುತ್ತಿರುವ ಸಿಪಿಎಂನಿಂದ ರಾಜ್ಯದ ಜನ ರೋಸಿ ಹೋಗಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಪ್ರಕರಣಗಳಲ್ಲಿ ರಾಜ್ಯವೇ ನಂ.1 ಸ್ಥಾನದಲ್ಲಿದೆ. ಇದೆಲ್ಲದಕ್ಕೂ ಕಾರಣ ಸಿಪಿಎಂ ಎಂದು ರಾಮ್ ಮಾಧವ್ ಟೀಕಿಸಿದ್ದಾರೆ.

ಫೆಬ್ರವರಿ 18ರಂದು ತ್ರಿಪುರಾ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಿಜೆಪಿ-ಐಪಿಎಫ್ ಟಿ ಒಕ್ಕೂಟ ಚುನಾವಣೆ ಎದುರಿಸುತ್ತಿವೆ. ಫೆ.11ರಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search