• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಸೇರಿದಕ್ಕೆ ಸಿಪಿಎಂ ಕಾರ್ಯಕರ್ತರಿಂದ ಜೀವಬೆದರಿಕೆ, ಫೇಸ್ ಬುಕ್ ಲೈವ್ ನಲ್ಲಿ ಸಹಾಯ ಯಾಚಿಸಿದ ಮಗಳು

TNN Correspondent Posted On February 10, 2018
0


0
Shares
  • Share On Facebook
  • Tweet It

ಕೊಚ್ಚಿ: ಕೇರಳದಲ್ಲಿ ರಾಜಕೀಯ ಧ್ವೇಷ ಸಾಧನೆ ಮುಂದುವರಿದಿದ್ದು, ಆಡಳಿತದಲ್ಲಿರುವ ಕೆಂಪು ಸರ್ಕಾರ ವಿರೋಧ ಪಕ್ಷಗಳ ಕಾರ್ಯಕರ್ತರನ್ನು ಹಣಿಯುವ, ಕೊಲೆ ಮಾಡುವ, ಬೆದರಿಕೆ ಒಡ್ಡುವವರಿಗೆ ಸಾಥ್ ನೀಡುತ್ತಿದ್ದೇಯೇ ಎಂಬುದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಕಾಸರಗೋಡು ಜಿಲ್ಲೆಯ ಸ್ಥಳೀಯ ಮುಖಂಡರೊಬ್ಬರು ಬಿಜೆಪಿ ಸೇರ್ಪಡೆಯಾಗಿದಕ್ಕೆ ಸಿಪಿಎಂ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಒಡ್ಡಲಾಗಿದೆ. ನನ್ನ ತಂದೆಯನ್ನು ರಕ್ಷಿಸಿ ಎಂದು ಮಗಳೊಬ್ಬಳು ಫೇಸ್ ಬುಕ್ ಲೈವ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾಳೆ. ಇದೀಗ ಆ ವಿಡಿಯೋ ವೈರಲ್ ಆಗಿದ್ದು, ಮತ್ತೊಮ್ಮೆ ಕೆಂಪು ಉಗ್ರರ ಕರಾಳ ಮುಖದ ಅನಾವರಣವಾಗಿದೆ.

ಬಿಜೆಪಿ ಮುಖಂಡ ಸುಕುಮಾರನ್ ಇತ್ತೀಚೆಗೆ ಕಾಸರಗೋಡುನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮಣ್ಣಮಂ ರಾಜಶೇಖರನ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

ಪುತ್ರಿ, ಹತ್ತನೇ ತರಗತಿಯ ವಿದ್ಯಾರ್ಥಿನಿ ಅಶ್ವೀನಿ ಫೇಸ್ ಬುಕ್ ಲೈವ್ ನಲ್ಲಿ ‘ನನ್ನ ತಂದೆ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಕೊಲೆ ಬೆದರಿಕೆ ಒಡ್ಡಲಾಗಿದೆ. ಸ್ಥಳೀಯ ಸಿಪಿಎಂ ಮುಖಂಡರು ನನ್ನ ತಂದೆ ಬಿಜೆಪಿ ಸೇರಿದ್ದನ್ನು ವಿರೋಧಿಸುತ್ತಿದ್ದಾರೆ ಮತ್ತು ಕೊಲೆ ಬೆದರಿಕೆ ಒಡ್ಡಿದ್ದಾರೆ.

ಇತ್ತೀಚೆಗೆ ಕರಿಂತಲಮ್ ನಲ್ಲಿರುವ ಶಾಲೆಯಿಂದ ನನ್ನ ತಂದೆ ಮತ್ತು ನಾನು ಮನೆಗೆ ಬರುವಾಗ ಸಿಪಿಎಂನ ಐದು ಕಾರ್ಯಕರ್ತರು ನಮಗೆ ಜೀವ ಬೆದರಿಕೆ ಒಡ್ಡಿದ್ದಾರೆ. ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ. ನಗರದಲ್ಲಿ ನೆಮ್ಮದಿಯ ಜೀವನ ನಡೆಸು ನೋಡೋಣ ಎಂದು ಬೆದರಿಕೆ ಒಡ್ಡಿದ್ದಾರೆ. ಅವರು ಪೊಲೀಸರನ್ನು ಸೇರಿ ಯಾರಿಗೂ ಹೆದರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾಳೆ.

ನಾನು ನಿತ್ಯ ಶಾಲೆಗೆ ಹೋಗುವ ಮಾರ್ಗದಲ್ಲಿ ಅವರು ನಮಗಾಗಿ ಕಾಯುತ್ತಾರೆ. ಅವರಿಂದ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ಪೊಲೀಸರಿಗೆ ದೂರು ನೀಡಿದರೂ, ಅವರು ಹೆದರುವುದಿಲ್ಲ. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ‘ಸುಕುಮಾರನ್ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

https://www.facebook.com/BJP4keralam/videos/1954559554804164/

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search