• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಸೇರಿದಕ್ಕೆ ಸಿಪಿಎಂ ಕಾರ್ಯಕರ್ತರಿಂದ ಜೀವಬೆದರಿಕೆ, ಫೇಸ್ ಬುಕ್ ಲೈವ್ ನಲ್ಲಿ ಸಹಾಯ ಯಾಚಿಸಿದ ಮಗಳು

TNN Correspondent Posted On February 10, 2018
0


0
Shares
  • Share On Facebook
  • Tweet It

ಕೊಚ್ಚಿ: ಕೇರಳದಲ್ಲಿ ರಾಜಕೀಯ ಧ್ವೇಷ ಸಾಧನೆ ಮುಂದುವರಿದಿದ್ದು, ಆಡಳಿತದಲ್ಲಿರುವ ಕೆಂಪು ಸರ್ಕಾರ ವಿರೋಧ ಪಕ್ಷಗಳ ಕಾರ್ಯಕರ್ತರನ್ನು ಹಣಿಯುವ, ಕೊಲೆ ಮಾಡುವ, ಬೆದರಿಕೆ ಒಡ್ಡುವವರಿಗೆ ಸಾಥ್ ನೀಡುತ್ತಿದ್ದೇಯೇ ಎಂಬುದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಕಾಸರಗೋಡು ಜಿಲ್ಲೆಯ ಸ್ಥಳೀಯ ಮುಖಂಡರೊಬ್ಬರು ಬಿಜೆಪಿ ಸೇರ್ಪಡೆಯಾಗಿದಕ್ಕೆ ಸಿಪಿಎಂ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಒಡ್ಡಲಾಗಿದೆ. ನನ್ನ ತಂದೆಯನ್ನು ರಕ್ಷಿಸಿ ಎಂದು ಮಗಳೊಬ್ಬಳು ಫೇಸ್ ಬುಕ್ ಲೈವ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾಳೆ. ಇದೀಗ ಆ ವಿಡಿಯೋ ವೈರಲ್ ಆಗಿದ್ದು, ಮತ್ತೊಮ್ಮೆ ಕೆಂಪು ಉಗ್ರರ ಕರಾಳ ಮುಖದ ಅನಾವರಣವಾಗಿದೆ.

ಬಿಜೆಪಿ ಮುಖಂಡ ಸುಕುಮಾರನ್ ಇತ್ತೀಚೆಗೆ ಕಾಸರಗೋಡುನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮಣ್ಣಮಂ ರಾಜಶೇಖರನ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

ಪುತ್ರಿ, ಹತ್ತನೇ ತರಗತಿಯ ವಿದ್ಯಾರ್ಥಿನಿ ಅಶ್ವೀನಿ ಫೇಸ್ ಬುಕ್ ಲೈವ್ ನಲ್ಲಿ ‘ನನ್ನ ತಂದೆ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಕೊಲೆ ಬೆದರಿಕೆ ಒಡ್ಡಲಾಗಿದೆ. ಸ್ಥಳೀಯ ಸಿಪಿಎಂ ಮುಖಂಡರು ನನ್ನ ತಂದೆ ಬಿಜೆಪಿ ಸೇರಿದ್ದನ್ನು ವಿರೋಧಿಸುತ್ತಿದ್ದಾರೆ ಮತ್ತು ಕೊಲೆ ಬೆದರಿಕೆ ಒಡ್ಡಿದ್ದಾರೆ.

ಇತ್ತೀಚೆಗೆ ಕರಿಂತಲಮ್ ನಲ್ಲಿರುವ ಶಾಲೆಯಿಂದ ನನ್ನ ತಂದೆ ಮತ್ತು ನಾನು ಮನೆಗೆ ಬರುವಾಗ ಸಿಪಿಎಂನ ಐದು ಕಾರ್ಯಕರ್ತರು ನಮಗೆ ಜೀವ ಬೆದರಿಕೆ ಒಡ್ಡಿದ್ದಾರೆ. ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ. ನಗರದಲ್ಲಿ ನೆಮ್ಮದಿಯ ಜೀವನ ನಡೆಸು ನೋಡೋಣ ಎಂದು ಬೆದರಿಕೆ ಒಡ್ಡಿದ್ದಾರೆ. ಅವರು ಪೊಲೀಸರನ್ನು ಸೇರಿ ಯಾರಿಗೂ ಹೆದರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾಳೆ.

ನಾನು ನಿತ್ಯ ಶಾಲೆಗೆ ಹೋಗುವ ಮಾರ್ಗದಲ್ಲಿ ಅವರು ನಮಗಾಗಿ ಕಾಯುತ್ತಾರೆ. ಅವರಿಂದ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ಪೊಲೀಸರಿಗೆ ದೂರು ನೀಡಿದರೂ, ಅವರು ಹೆದರುವುದಿಲ್ಲ. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ‘ಸುಕುಮಾರನ್ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

https://www.facebook.com/BJP4keralam/videos/1954559554804164/

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search