• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಸೇರಿದಕ್ಕೆ ಸಿಪಿಎಂ ಕಾರ್ಯಕರ್ತರಿಂದ ಜೀವಬೆದರಿಕೆ, ಫೇಸ್ ಬುಕ್ ಲೈವ್ ನಲ್ಲಿ ಸಹಾಯ ಯಾಚಿಸಿದ ಮಗಳು

TNN Correspondent Posted On February 10, 2018
0


0
Shares
  • Share On Facebook
  • Tweet It

ಕೊಚ್ಚಿ: ಕೇರಳದಲ್ಲಿ ರಾಜಕೀಯ ಧ್ವೇಷ ಸಾಧನೆ ಮುಂದುವರಿದಿದ್ದು, ಆಡಳಿತದಲ್ಲಿರುವ ಕೆಂಪು ಸರ್ಕಾರ ವಿರೋಧ ಪಕ್ಷಗಳ ಕಾರ್ಯಕರ್ತರನ್ನು ಹಣಿಯುವ, ಕೊಲೆ ಮಾಡುವ, ಬೆದರಿಕೆ ಒಡ್ಡುವವರಿಗೆ ಸಾಥ್ ನೀಡುತ್ತಿದ್ದೇಯೇ ಎಂಬುದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಕಾಸರಗೋಡು ಜಿಲ್ಲೆಯ ಸ್ಥಳೀಯ ಮುಖಂಡರೊಬ್ಬರು ಬಿಜೆಪಿ ಸೇರ್ಪಡೆಯಾಗಿದಕ್ಕೆ ಸಿಪಿಎಂ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಒಡ್ಡಲಾಗಿದೆ. ನನ್ನ ತಂದೆಯನ್ನು ರಕ್ಷಿಸಿ ಎಂದು ಮಗಳೊಬ್ಬಳು ಫೇಸ್ ಬುಕ್ ಲೈವ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾಳೆ. ಇದೀಗ ಆ ವಿಡಿಯೋ ವೈರಲ್ ಆಗಿದ್ದು, ಮತ್ತೊಮ್ಮೆ ಕೆಂಪು ಉಗ್ರರ ಕರಾಳ ಮುಖದ ಅನಾವರಣವಾಗಿದೆ.

ಬಿಜೆಪಿ ಮುಖಂಡ ಸುಕುಮಾರನ್ ಇತ್ತೀಚೆಗೆ ಕಾಸರಗೋಡುನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮಣ್ಣಮಂ ರಾಜಶೇಖರನ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

ಪುತ್ರಿ, ಹತ್ತನೇ ತರಗತಿಯ ವಿದ್ಯಾರ್ಥಿನಿ ಅಶ್ವೀನಿ ಫೇಸ್ ಬುಕ್ ಲೈವ್ ನಲ್ಲಿ ‘ನನ್ನ ತಂದೆ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಕೊಲೆ ಬೆದರಿಕೆ ಒಡ್ಡಲಾಗಿದೆ. ಸ್ಥಳೀಯ ಸಿಪಿಎಂ ಮುಖಂಡರು ನನ್ನ ತಂದೆ ಬಿಜೆಪಿ ಸೇರಿದ್ದನ್ನು ವಿರೋಧಿಸುತ್ತಿದ್ದಾರೆ ಮತ್ತು ಕೊಲೆ ಬೆದರಿಕೆ ಒಡ್ಡಿದ್ದಾರೆ.

ಇತ್ತೀಚೆಗೆ ಕರಿಂತಲಮ್ ನಲ್ಲಿರುವ ಶಾಲೆಯಿಂದ ನನ್ನ ತಂದೆ ಮತ್ತು ನಾನು ಮನೆಗೆ ಬರುವಾಗ ಸಿಪಿಎಂನ ಐದು ಕಾರ್ಯಕರ್ತರು ನಮಗೆ ಜೀವ ಬೆದರಿಕೆ ಒಡ್ಡಿದ್ದಾರೆ. ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ. ನಗರದಲ್ಲಿ ನೆಮ್ಮದಿಯ ಜೀವನ ನಡೆಸು ನೋಡೋಣ ಎಂದು ಬೆದರಿಕೆ ಒಡ್ಡಿದ್ದಾರೆ. ಅವರು ಪೊಲೀಸರನ್ನು ಸೇರಿ ಯಾರಿಗೂ ಹೆದರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾಳೆ.

ನಾನು ನಿತ್ಯ ಶಾಲೆಗೆ ಹೋಗುವ ಮಾರ್ಗದಲ್ಲಿ ಅವರು ನಮಗಾಗಿ ಕಾಯುತ್ತಾರೆ. ಅವರಿಂದ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ಪೊಲೀಸರಿಗೆ ದೂರು ನೀಡಿದರೂ, ಅವರು ಹೆದರುವುದಿಲ್ಲ. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ‘ಸುಕುಮಾರನ್ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

https://www.facebook.com/BJP4keralam/videos/1954559554804164/

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search