• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಶೋಕಿಗೆ ಮಧ್ಯಾಹ್ನವೇ ತಲೆ ಎತ್ತಿದ್ದ ಮರಗಳು, ಅನುಮಾನ ಮೂಡಿಸಿದ ಕೈ ಶಾಸಕನ ದಿಢೀರ್ ಅಭಿವೃದ್ಧಿ

TNN Correspondent Posted On February 10, 2018
0


0
Shares
  • Share On Facebook
  • Tweet It

ಕಲಬುರಗಿ: ಕಾಂಗ್ರೆಸ್ ನಾಯಕರ ಅಭಿವೃದ್ಧಿ ಏಷ್ಟರ ಮಟ್ಟಿಗೆ ದಾರಿದ್ರ್ಯಕ್ಕೆ ಇಳಿದಿದ್ದಾರೆ ಎಂದರೇ ಕೇವಲ ರಾಹುಲ್ ಗಾಂಧಿ ಭೇಟಿ ನೀಡುತ್ತಾರೆ ಎಂಬ ಕಾರಣಕ್ಕೆ ಸರ್ಕಾರದ ಲಕ್ಷಾಂತರ ಹಣವನ್ನು ಶೋಕಿಗಾಗಿ ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಇದೀಗ ತಟ್ಟನೇ ರಾಹುಲ್ ಗಾಂಧಿ ಭೇಟಿ ನೀಡುವ ಅತಿಥಿ ಗೃಹಗಳು, ರಸ್ತೆಗಳು ನೆನಪಾಗಿದ್ದು, ರಾಹುಲ್ ಓಡಾಡುವ ರಸ್ತೆ ಮಾರ್ಗಗಳನ್ನು ತರಾತುರಿಯಲ್ಲಿ ಸುಸ್ತಿಗೊಳಿಸುತ್ತಿದ್ದಾರೆ.

ಇತ್ತೀಚೆಗೆ ಕೊಪ್ಪಳದಲ್ಲಿ ರಾಹುಲ್ ಗಾಂಧಿ  ವ್ಯಾಸ್ತವ್ಯ ಹೂಡಲಿರುವ ಅತಿಥಿ ಗೃಹಕ್ಕೆ ಸರ್ಕಾರದ ಅನುದಾನದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನವೀಕರಣ ಮಾಡಿಸಿದ್ದರು, ಇದೀಗ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಫೆ.12ರಂದು ರಾಹುಲ್ ರ್ಯಾಲಿ ನಡೆಸುವ ರಸ್ತೆಯಲ್ಲಿ ಕೃತಕ ಹಸಿರುಕರಣಕ್ಕೆ ಮುಂದಾಗಿದ್ದಾರೆ. ಜೇವರ್ಗಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಲಂಕಾರಿಕಾ ಗಿಡಗಳನ್ನು ನೆಡುತ್ತಿದ್ದಾರೆ.

ಕೃತಕ ಹಸಿರೀಕರಣ ಮಾಡಲು ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಕ್ರಮ ಕೈಗೊಂಡಿದ್ದಾರೆ. ರಾಹುಲ್ ಗಾಂಧಿ ಸಂಚರಿಸುವ ಮಾರ್ಗ ಮಧ್ಯದ ಉದ್ದಕ್ಕೂ ಸುಮಾರು 14 ಸಾವಿರ ರೂಪಾಯಿ ಬೆಲೆಯ, ಬೆಳೆದು ನಿಂತ ಪಾಮ್ ಗಿಡಗಳನ್ನು ನೆಡಲಾಗುತ್ತಿದೆ.

ಯಾವ ಯೋಜನೆ ರಾಹುಲ್ ಶೋಕಿಗೆ..?

ರಾಹುಲ್ ಪ್ರವಾಸಕ್ಕೆ ಬರುವ ವೇಳೆ ಶೋಕಿಗಾಗಿ ಮರಗಳನ್ನು ನೆಡುತ್ತಿರುವುದು ಸಾರ್ವಜನಿಕರಲ್ಲಿ ಹಲವು ಅನುಮಾನಗಳನ್ನು ಮೂಡಿಸಿದೆ. ಯಾವ ಯೋಜನೆ ಅಥವಾ ಯಾರ ಅನುದಾನದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search