• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ಬೆತ್ತಲಾಯಿತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಪಾಕಿಸ್ತಾನ ಪ್ರೇಮ, ಏನೆನ್ನಬೇಕು ಇವರಿಗೆ?

TNN Correspondent Posted On February 11, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಸೈನಿಕರಿಗೆ ಅನುದಿನವೂ ರಣರಂಗದ ವಾತಾವರಣ. ದಿನಬೆಳಗಾದರೆ ಎಷ್ಟು ಸೈನಿಕರ ಜೀವ ಹೋಗುತ್ತೋ ಏನೋ? ಸರ್ಕಾರ ನೋಡಿದರೆ ಹೇಗಾದರೂ ಮಾಡಿ ಪಾಕಿಸ್ತಾನವನ್ನು ಕಟ್ಟಿ ಹಾಕಬೇಕು ಎಂದು ಉದ್ದೇಶಿಸಿದರೆ, ಇದೇ ಸೈನಿಕರು ತಮ್ಮ ಜೀವವನ್ನೇ ಒತ್ತೆ ಇಟ್ಟು ಕಾಶ್ಮೀರವನ್ನು ರಕ್ಷಿಸುತ್ತಾರೆ. ಪಾಕ್ ಉಗ್ರರು, ಸೈನಿಕರ ಎದೆಗೆ ಬಂದೂಕಿನ ನಳಿಕೆಯಿಡಲು ಹಾತೊರೆಯುತ್ತಿರುತ್ತಾರೆ.

ಆದರೆ ಜಮ್ಮು-ಕಾಶ್ಮೀರದಲ್ಲಿ ಆಳ್ವಿಕೆ ನಡೆಸುವ, ಭಾರತದ ಅನ್ನ ತಿನ್ನುವ ಕೆಲ ರಾಜಕಾರಣಿಗಳು, ಅದರಲ್ಲೂ ನ್ಯಾಷನಲ್ ಕಾನ್ಫರೆನ್ಸ್ ಎಂಬ ಪಕ್ಷದ ವಕ್ತಾರರಂತೂ ತಮ್ಮ ಆತ್ಮವನ್ನು ಪಾಕಿಸ್ತಾನದಲ್ಲೇ ಇಟ್ಟಿದ್ದೇವೆ ಎಂಬಂತೆ ವರ್ತಿಸುತ್ತಾರೆ.

ಇದಕ್ಕೆ ಸಾಕ್ಷಿಯಾಗಿ ಶನಿವಾರ ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಕ್ಬರ್ ಲೋನ್ ಎಂಬಾತ ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ತಮ್ಮ ಮನಸ್ಥಿತಿ ಎಂಥಾದ್ದು ಎಂಬುದನ್ನು ಸಾಬೀತುಪಡಿಸಿದ್ದಾನೆ.

ಅಷ್ಟೇ ಅಲ್ಲ, ವಿಧಾನಸಭೆಯಿಂದ ಹೊರಗೆ ಬಂದ ಈತ ಎಂಥಾ ಲಜ್ಜೆಗೇಡಿ ಹೇಳಿಕೆ ನೀಡುತ್ತಾನೆಂದರೆ, “ಹೌದು, ನಾನು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ನಿಜ. ಅದು ನನ್ನ ವೈಯಕ್ತಿಕ ದೃಷ್ಟಿಕೋನ” ಎಂದಿದ್ದಾನೆ.

ನಾನು ಹೀಗೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂಬುದನ್ನೇ ನನ್ನ ಭಾವನೆ ಎಂದಿರುವ ಈತನ ಹೇಳಿಕೆಗೆ ವ್ಯಾಪಕ ವಿರೋಧ ಸಹ ವ್ಯಕ್ತವಾಗಿದೆ.

ಮೊನ್ನೆಯಷ್ಟೇ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಯರು ಎಂದರೆ ಅವರಿಗೆ ಮೂರು ವರ್ಷ ಜೈಲಿಗೆ ಹಾಕಬೇಕು ಎಂದಿದ್ದರು ಎಐಎಂಐಎಂ ಮುಖ್ಯಸ್ಥ, ಸಂಸದ ಅಕ್ಬರುದ್ದೀನ್ ಓವೈಸಿ. ಈಗ ಒಬ್ಬ ಮುಸ್ಲಿಂ ಶಾಸಕ ಪಾಕಿಸ್ತಾನದ ಪರವಾಗಿ ಮಾತನಾಡಿದ್ದಾನೆ. ಹೇಳಿ ಓವೈಸಿ ಏನು ಮಾಡಬೇಕು ಇವರಿಗೆ?

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search