• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮತ್ತೆ ಬೆತ್ತಲಾಯಿತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಪಾಕಿಸ್ತಾನ ಪ್ರೇಮ, ಏನೆನ್ನಬೇಕು ಇವರಿಗೆ?

TNN Correspondent Posted On February 11, 2018


  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಸೈನಿಕರಿಗೆ ಅನುದಿನವೂ ರಣರಂಗದ ವಾತಾವರಣ. ದಿನಬೆಳಗಾದರೆ ಎಷ್ಟು ಸೈನಿಕರ ಜೀವ ಹೋಗುತ್ತೋ ಏನೋ? ಸರ್ಕಾರ ನೋಡಿದರೆ ಹೇಗಾದರೂ ಮಾಡಿ ಪಾಕಿಸ್ತಾನವನ್ನು ಕಟ್ಟಿ ಹಾಕಬೇಕು ಎಂದು ಉದ್ದೇಶಿಸಿದರೆ, ಇದೇ ಸೈನಿಕರು ತಮ್ಮ ಜೀವವನ್ನೇ ಒತ್ತೆ ಇಟ್ಟು ಕಾಶ್ಮೀರವನ್ನು ರಕ್ಷಿಸುತ್ತಾರೆ. ಪಾಕ್ ಉಗ್ರರು, ಸೈನಿಕರ ಎದೆಗೆ ಬಂದೂಕಿನ ನಳಿಕೆಯಿಡಲು ಹಾತೊರೆಯುತ್ತಿರುತ್ತಾರೆ.

ಆದರೆ ಜಮ್ಮು-ಕಾಶ್ಮೀರದಲ್ಲಿ ಆಳ್ವಿಕೆ ನಡೆಸುವ, ಭಾರತದ ಅನ್ನ ತಿನ್ನುವ ಕೆಲ ರಾಜಕಾರಣಿಗಳು, ಅದರಲ್ಲೂ ನ್ಯಾಷನಲ್ ಕಾನ್ಫರೆನ್ಸ್ ಎಂಬ ಪಕ್ಷದ ವಕ್ತಾರರಂತೂ ತಮ್ಮ ಆತ್ಮವನ್ನು ಪಾಕಿಸ್ತಾನದಲ್ಲೇ ಇಟ್ಟಿದ್ದೇವೆ ಎಂಬಂತೆ ವರ್ತಿಸುತ್ತಾರೆ.

ಇದಕ್ಕೆ ಸಾಕ್ಷಿಯಾಗಿ ಶನಿವಾರ ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಕ್ಬರ್ ಲೋನ್ ಎಂಬಾತ ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ತಮ್ಮ ಮನಸ್ಥಿತಿ ಎಂಥಾದ್ದು ಎಂಬುದನ್ನು ಸಾಬೀತುಪಡಿಸಿದ್ದಾನೆ.

ಅಷ್ಟೇ ಅಲ್ಲ, ವಿಧಾನಸಭೆಯಿಂದ ಹೊರಗೆ ಬಂದ ಈತ ಎಂಥಾ ಲಜ್ಜೆಗೇಡಿ ಹೇಳಿಕೆ ನೀಡುತ್ತಾನೆಂದರೆ, “ಹೌದು, ನಾನು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ನಿಜ. ಅದು ನನ್ನ ವೈಯಕ್ತಿಕ ದೃಷ್ಟಿಕೋನ” ಎಂದಿದ್ದಾನೆ.

ನಾನು ಹೀಗೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂಬುದನ್ನೇ ನನ್ನ ಭಾವನೆ ಎಂದಿರುವ ಈತನ ಹೇಳಿಕೆಗೆ ವ್ಯಾಪಕ ವಿರೋಧ ಸಹ ವ್ಯಕ್ತವಾಗಿದೆ.

ಮೊನ್ನೆಯಷ್ಟೇ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಯರು ಎಂದರೆ ಅವರಿಗೆ ಮೂರು ವರ್ಷ ಜೈಲಿಗೆ ಹಾಕಬೇಕು ಎಂದಿದ್ದರು ಎಐಎಂಐಎಂ ಮುಖ್ಯಸ್ಥ, ಸಂಸದ ಅಕ್ಬರುದ್ದೀನ್ ಓವೈಸಿ. ಈಗ ಒಬ್ಬ ಮುಸ್ಲಿಂ ಶಾಸಕ ಪಾಕಿಸ್ತಾನದ ಪರವಾಗಿ ಮಾತನಾಡಿದ್ದಾನೆ. ಹೇಳಿ ಓವೈಸಿ ಏನು ಮಾಡಬೇಕು ಇವರಿಗೆ?

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search