• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಪೋಷಿತ ಉಗ್ರ ಸೈಯದ್ ಸಲಾಹುದ್ದೀನ್, ಮಸೂದ್ ಅಜರ್ ಸುಂಜನ್ವಾ ದಾಳಿ ಮಾಸ್ಟರ್ ಮೈಂಡ್

TNN Correspondent Posted On February 11, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಪೋಷಿತ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಜಮ್ಮು ಕಾಶ್ಮೀರದ ಸುಂಜನ್ವಾ ಸೈನಿಕ ಶಿಬಿರದ ಮೇಲೆ ದಾಳಿ ನಡೆಸಿದ್ದರಿಂದ ಮೂವರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದರು. ಇದುವರೆಗೂ ಕಾರ್ಯಾಚರಣೆ ಮುಂದುವರಿದಿದೆ. ಆದರೆ ಈ ದಾಳಿಯ ಮುಖ್ಯ ಸೂತ್ರದಾರರೂ ಪಾಕಿಸ್ತಾನದಲ್ಲಿ ಸುಖದಾಯಕ ಜೀವನ ಕಳೆಯುತ್ತಿದ್ದಾರೆ.

ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಜೈಷ್ ಎ ಮಹಮ್ಮದ್ ಮುಖ್ಯಸ್ಥ ಮಸೂದ್ ಸುಂಜನ್ವಾ ದಾಳಿಯ ಪ್ರಮುಖ ರೂವಾರಿಗಳು ಎಂಬ ವರದಿ ಹೊರಬಿದ್ದಿದೆ. ಈ ಮೂಲಕ ಮತ್ತೊಮ್ಮೆ ಪಾಕಿಸ್ತಾನ ಪೋಷಿತ ಭಯೋತ್ಪಾದಕರು ಭಾರತಕ್ಕೆ ಕಂಟವಾಗಿದ್ದು ಸಾಬೀತಾಗಿದೆ.

ಇತ್ತೀಚೆಗೆ ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಗಳ ಸಭೆ ನಡೆದಿದ್ದು, ಆ ಸಭೆಯಲ್ಲೇ ಸುಂಜನ್ವಾ ದಾಳಿಯ ಷಡ್ಯಂತ್ರ ರೂಪಿಸಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಅಲ್ಲದೇ ಎರಡು ಸಂಘಟನೆಗಳು ಮುಜಾಫರಬಾದ್ ನಲ್ಲಿ ಉಗ್ರ ತರಬೇತಿ ಕ್ಯಾಂಪ್ ಆರಂಭಿಸಿದ್ದು, ಪ್ರಸ್ತುತ ಸುಂಜನ್ವಾ ಸೈನಿಕ ಶಿಬಿರದ ಮೇಲೆ ದಾಳಿ ಮಾಡಿದವರೂ ಮುಜಾಫರಬಾದ್ ಸೈನಿಕ ಶಿಬಿರದಲ್ಲೇ ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ.

ಸುಂಜನ್ವಾ ಸೈನಿಕ ನೆಲೆ ಮೇಲೆ ದಾಳಿ ನಡೆಸಿದ ಮೂವರು ಉಗ್ರನ್ನು ಹೊಡೆದುರಿಳಿಸಿದ್ದು, ಅವರಿಂದ ವಶಕ್ಕೆ ಪಡೆದ ಶಸ್ತ್ರಾಗಳು ಜೈಷ್ ಎ ಮಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಳ ಗುರುತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶ್ವ ಸಮುದಾಯವೇ ಈ ಉಗ್ರರನ್ನು ಜಾಗತಿಕ ಭಯೋತ್ಪಾದಕರು ಎಂದು ಘೋಷಿಸಿದ್ದರೂ ಪಾಕಿಸ್ತಾನ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಈ ಮೂಲಕ ಭಾರತ ಸೇರಿ ನಾನಾ ಕಡೆ ನಿರಂತರವಾಗಿ ದಾಳೆ ನಡೆಸುತ್ತಿರುವ ಭಯೋತ್ಪಾದಕರಿಗೆ ಪಾಕಿಸ್ತಾನ ಪರೋಕ್ಷ ಕುಮ್ಮಕ್ಕು ನೀಡುತ್ತಿರುವುದು ಪದೇ ಪದೆ ಸಾಬೀತಾಗುತ್ತಿದೆ.

ಶನಿವಾರ ನಡೆದ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದರು. ಅಲ್ಲದೇ 9 ಜನರಿಗೆ ಗಾಯಗಳಾಗಿದ್ದವು. ಸೈನಿಕರ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search