• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಪೋಷಿತ ಉಗ್ರ ಸೈಯದ್ ಸಲಾಹುದ್ದೀನ್, ಮಸೂದ್ ಅಜರ್ ಸುಂಜನ್ವಾ ದಾಳಿ ಮಾಸ್ಟರ್ ಮೈಂಡ್

TNN Correspondent Posted On February 11, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಪೋಷಿತ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಜಮ್ಮು ಕಾಶ್ಮೀರದ ಸುಂಜನ್ವಾ ಸೈನಿಕ ಶಿಬಿರದ ಮೇಲೆ ದಾಳಿ ನಡೆಸಿದ್ದರಿಂದ ಮೂವರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದರು. ಇದುವರೆಗೂ ಕಾರ್ಯಾಚರಣೆ ಮುಂದುವರಿದಿದೆ. ಆದರೆ ಈ ದಾಳಿಯ ಮುಖ್ಯ ಸೂತ್ರದಾರರೂ ಪಾಕಿಸ್ತಾನದಲ್ಲಿ ಸುಖದಾಯಕ ಜೀವನ ಕಳೆಯುತ್ತಿದ್ದಾರೆ.

ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಜೈಷ್ ಎ ಮಹಮ್ಮದ್ ಮುಖ್ಯಸ್ಥ ಮಸೂದ್ ಸುಂಜನ್ವಾ ದಾಳಿಯ ಪ್ರಮುಖ ರೂವಾರಿಗಳು ಎಂಬ ವರದಿ ಹೊರಬಿದ್ದಿದೆ. ಈ ಮೂಲಕ ಮತ್ತೊಮ್ಮೆ ಪಾಕಿಸ್ತಾನ ಪೋಷಿತ ಭಯೋತ್ಪಾದಕರು ಭಾರತಕ್ಕೆ ಕಂಟವಾಗಿದ್ದು ಸಾಬೀತಾಗಿದೆ.

ಇತ್ತೀಚೆಗೆ ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಗಳ ಸಭೆ ನಡೆದಿದ್ದು, ಆ ಸಭೆಯಲ್ಲೇ ಸುಂಜನ್ವಾ ದಾಳಿಯ ಷಡ್ಯಂತ್ರ ರೂಪಿಸಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಅಲ್ಲದೇ ಎರಡು ಸಂಘಟನೆಗಳು ಮುಜಾಫರಬಾದ್ ನಲ್ಲಿ ಉಗ್ರ ತರಬೇತಿ ಕ್ಯಾಂಪ್ ಆರಂಭಿಸಿದ್ದು, ಪ್ರಸ್ತುತ ಸುಂಜನ್ವಾ ಸೈನಿಕ ಶಿಬಿರದ ಮೇಲೆ ದಾಳಿ ಮಾಡಿದವರೂ ಮುಜಾಫರಬಾದ್ ಸೈನಿಕ ಶಿಬಿರದಲ್ಲೇ ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ.

ಸುಂಜನ್ವಾ ಸೈನಿಕ ನೆಲೆ ಮೇಲೆ ದಾಳಿ ನಡೆಸಿದ ಮೂವರು ಉಗ್ರನ್ನು ಹೊಡೆದುರಿಳಿಸಿದ್ದು, ಅವರಿಂದ ವಶಕ್ಕೆ ಪಡೆದ ಶಸ್ತ್ರಾಗಳು ಜೈಷ್ ಎ ಮಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಳ ಗುರುತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶ್ವ ಸಮುದಾಯವೇ ಈ ಉಗ್ರರನ್ನು ಜಾಗತಿಕ ಭಯೋತ್ಪಾದಕರು ಎಂದು ಘೋಷಿಸಿದ್ದರೂ ಪಾಕಿಸ್ತಾನ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಈ ಮೂಲಕ ಭಾರತ ಸೇರಿ ನಾನಾ ಕಡೆ ನಿರಂತರವಾಗಿ ದಾಳೆ ನಡೆಸುತ್ತಿರುವ ಭಯೋತ್ಪಾದಕರಿಗೆ ಪಾಕಿಸ್ತಾನ ಪರೋಕ್ಷ ಕುಮ್ಮಕ್ಕು ನೀಡುತ್ತಿರುವುದು ಪದೇ ಪದೆ ಸಾಬೀತಾಗುತ್ತಿದೆ.

ಶನಿವಾರ ನಡೆದ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದರು. ಅಲ್ಲದೇ 9 ಜನರಿಗೆ ಗಾಯಗಳಾಗಿದ್ದವು. ಸೈನಿಕರ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search