• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಂಧ್ರಪ್ರದೇಶ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುನ್ನುಡಿ, 1,000 ಕೋಟಿ ಅನುದಾನ

TNN Correspondent Posted On February 11, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟದ ಪಾಲುದಾರ ಆಂಧ್ರ ಪ್ರದೇಶದ ಟಿಡಿಪಿ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಅನುದಾನ ಘೋಷಿಸಿದ್ದು, ಆಂಧ್ರ ಪ್ರದೇಶದ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿದೆ.

ಬಿಜೆಪಿ ಮೈತ್ರಿ ಪಕ್ಷ ಟಿಡಿಪಿ ಆಂಧ್ರಪ್ರದೇಶದಲ್ಲಿ ಆಡಳಿತದಲ್ಲಿದ್ದು, ಎನ್ ಡಿಎ ಒಕ್ಕೂಟದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಅಲ್ಲದೇ ಅಮರಾವತಿಯಂತಹ ಬೃಹತ್ ನಗರ ನಿರ್ಮಾಣಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೈ ಹಾಕಿದ್ದಾರೆ. ಇನ್ನು ಹಲವು ಸಮಸ್ಯೆಗಳು ಆಂಧ್ರ ಪ್ರದೇಶದಲ್ಲಿದ್ದೂ, ಎಲ್ಲ ಸಮಸ್ಯೆಗಳಿಗೆ ಪೂರಕವಾಗಿ ಕೇಂದ್ರ ಸರ್ಕಾರ ಆಂಧ್ರಪ್ರದೇಶಕ್ಕೆ ಬೃಹತ್ ಮೊತ್ತದ ಅನುದಾನವನ್ನು ನೀಡುವ ಮೂಲಕ ಅನುಕೂಲ ಕಲ್ಪಿಸಿದೆ.

ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ 1,269 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಇದೇ ಅನುದಾನದಲ್ಲಿ ಪೋಲವಾರಂ ಯೋಜನೆಗೆ 417.44 ಕೋಟಿಯೂ ಸೇರಿರುವುದು ವಿಶೇಷ.
ಪೋಲವಾರಂ ಯೋಜನೆಗೆ 7,200 ಕೋಟಿ ರೂಪಾಯಿ ವೆಚ್ಚದ್ದಾಗಿದ್ದು, ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಾಗಿದೆ. ಇದುವರೆಗೂ 4,329 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ಜಂಟಿ ಆಯುಕ್ತ ತಿಳಿಸಿದ್ದಾರೆ.

ದೇಶಾದ್ಯಂತ ಮಹತ್ವದ ಯೋಜನೆಗಳಿಗೆ ನಿರಂತರವಾಗಿ ಅನುದಾನ ನೀಡುತ್ತಿರುವ ಸರ್ಕಾರ ಹಲವು ಅಭಿವೃದ್ಧಿಪರ ಕಾರ್ಯಗಳನ್ನು ಮಾಡುತ್ತಿದೆ. ಅದಕ್ಕೆ ಜತೆಯಾಗಿ ಇದೀಗ ಆಂಧ್ರ ಪ್ರದೇಶಕ್ಕೆ 1000 ಅನುದಾನ ಬಿಡುಗಡೆ ಮಾಡಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search