• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೋಗ ಅಭಿವೃದ್ಧಿ ನಿರ್ಲಕ್ಷ, ರಾಜ್ಯ ಸರ್ಕಾರದ ಸಚಿವರ ವಿರುದ್ಧವೇ ಕಾಗೋಡು ತಿಮ್ಮಪ್ಪ ಅಸಮಾಧಾನ

TNN Correspondent Posted On February 11, 2018
0


0
Shares
  • Share On Facebook
  • Tweet It

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವ ಋತು ಜಲಪಾತವನ್ನಾಗಿ ಮಾಡಬೇಕು ಎಂಬ ಆಗ್ರಹಕ್ಕೆ ತಕ್ಕಂತೆ ರಾಜ್ಯದ ಪ್ರವಾಸೋಧ್ಯಮ ಸಚಿವರು ಆಸಕ್ತಿ ವಹಿಸಿಲ್ಲ ಎಂದು ರಾಜ್ಯ ಸರ್ಕಾರದ ಸಚಿವರೇ ಆಗಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಭಿವೃದ್ಧಿ ಮಾಡಿದ್ದೇನೆ ಎಂದು ಬೊಗಳೆ ಬಿಡುತ್ತಿರುವ ಸಿದ್ದರಾಮಯ್ಯನವರಿಗೂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸಚಿವರೇ ಈ ರೀತಿಯ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಯಾವ ಮಟ್ಟದಲ್ಲಿ ಆಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ರಾಜ್ಯ ಸರ್ಕಾರ ಸರ್ವಋತು ಜೋಗದ ಬಗ್ಗೆ ಕೆಲಸ ಮಾಡಿದೆ, ಆದರೆ ಪ್ರವಾಸೋಧ್ಯಮ ಸಚಿವರಿಗೆ ಸರ್ವ ಋತು ಯೋಜನೆಗೆ ಬಗ್ಗೆ ಸೂಕ್ತ ಆಸಕ್ತಿ ಇಲ್ಲದಿರುವುದರಿಂದ ಯೋಜನೆಗೆ ಪೂರ್ಣವಾಗದೆ ನೆನೆಗುದಿದೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೋಗ ಜಲಪಾತಕ್ಕೆ ಸರ್ವ ಋತುಗಳಲ್ಲಿ ಪ್ರವಾಸಿಗರು ನೋಡಲು ಬರುವಂತೆ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ಅದಕ್ಕೆ ಪೂರಕ್ವಾಗಿ ಕಾರ್ಯ ನಿರ್ವಹಿಸಲು ಬಿ.ಆರ್.ಶೆಟ್ಟಿ ಕಂಪನಿ ಕೂಡ ಮುಂದಾಗಿತ್ತು. ಯೋಜನೆಗಾಗಿ ಅವರು ಪರಿಶೀಲನೆಯನ್ನೂ ಮಾಡಿದ್ದರು. ಆದರೆ, ದಾಖಲೆ ನೀಡುವಲ್ಲಿ ಅಧಿಕಾರಿಗಳು ತೋರಿದ ವಿಳಂಬ ಹಾಗೂ ಪ್ರವಾಸೋದ್ಯಮ ಸಚಿವರ ನಿರಾಸಕ್ತಿಯಿಂದ ಸರ್ವ ಋತು ಯೋಜನೆ ವಿಳಂಬವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಸೋದ್ಯಮ ಸಚಿವರ ವಿರುದ್ಧವೇ ಸಚಿವ ಕಾಗೋಡು ತಿಮ್ಮಪ್ಪ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಸರ್ಕಾರದ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಕನ್ನಡಿಹಿಡಿದಂತಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search