• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಸೈನಿಕರ ಬಲಪಡಿಸಲು 1487 ಕೋಟಿ ರುಪಾಯಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

TNN Correspondent Posted On February 12, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರ ದಾಳಿ, ನಿಯಮ ಉಲ್ಲಂಘನೆ ಜಾಸ್ತಿಯಾದ ಬೆನ್ನಲ್ಲೇ, ಕೇಂದ್ರ ಸರ್ಕಾರ ಭಾರತೀಯ ಸೈನಿಕರ ಬಲಪಡಿಸಲು ಬರೋಬ್ಬರಿ 1487 ಕೋಟಿ ರುಪಾಯಿ ಬಿಡುಗಡೆಗೊಳಿಸಿದೆ.

2016ರಲ್ಲಿ ಪಠಾಣ್ ಕೋಟ್ ದಾಳಿಯಾದ ಬಳಿಕ ಸೈನ್ಯದ ಲೆಕ್ಕಪರಿಶೋಧನೆಯ ಹೊಣೆಹೊತ್ತಿರುವ ಲೆಫ್ಟಿನೆಂಟ್ ಕರ್ನಲ್ ಫಿಲಿಪ್ ಅವರು ಹಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರು. ಈಗ ಕೇಂದ್ರ ಸರ್ಕಾರ ಸೈನ್ಯಕ್ಕೆ ಅಪಾರ ಹಣ ಬಿಡುಗಡೆ ಮಾಡಿದೆ.

ಅಷ್ಟೇ ಅಲ್ಲ, ಹಣವನ್ನು ಸಂಪೂರ್ಣವಾಗಿ ವ್ಯಯಿಸಲು ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು 10 ತಿಂಗಳ ಗಡುವು ನೀಡಿದ್ದು, ಸೈನ್ಯಕ್ಕೆ ಬೇಕಾದ ಸಕಲ ಶಸ್ತ್ರಾಸ್ತ್ರ ಖರೀದಿ ಸೇರಿ ಹಲವು ಅಂಶಗಳಿಗೆ ಹಣ ವ್ಯಯಿಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವರ್ಷವೇ ಭಾರತ ಸೈನ್ಯದ ಮೂರು ವಿಭಾಗಗಳ ಬಲಪಡಿಸಲು ಆರ್ಥಿಕ ಸ್ವಾತಂತ್ರ್ಯ ನೀಡಿದ್ದು, ದೇಶದ ರಕ್ಷಣಾ ವಿಚಾರದಲ್ಲಿ ಯಾವುದೇ ರಾಜೀಯಾಗುವುದಿಲ್ಲ ಎಂಬ ಸಂದೇಶ ರವಾನಿಸಿತ್ತು. ಈಗ ಅದಕ್ಕೆ ಮುನ್ನುಡಿಯಾಗಿ ಹಣ ಬಿಡುಗಡೆ ಮಾಡಿದೆ. ಕಳೆದ ಎರಡು ದಿನಗಳಿಂದ ಪಾಕಿಸ್ತಾನಿ ಸೈನಿಕರು ಕಾಶ್ಮೀರದ ಗಡಿಯಲ್ಲಿ ಮಾಡಿದ ದಾಳಿಯಲ್ಲಿ ಭಾರತದ ಐವರು ಯೋಧರು ಹುತಾತ್ಮರಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search