• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಧರ್ಮಕ್ಕೆ ಮತಾಂತರವಾಗಿ, ಹಿಂದೂವನ್ನು ಮದುವೆಯಾಗಿದ್ದಕ್ಕೆ ಮುಸ್ಲಿಂ ಯುವಕರಿಗೆ ಜೀವ ಬೆದರಿಕೆ!

TNN Correspondent Posted On February 12, 2018
0


0
Shares
  • Share On Facebook
  • Tweet It

ಲಖನೌ: ಇಸ್ಲಾಮಿನಲ್ಲಿ ಎಂಥ ಲೆಕ್ಕಾಚಾರ ನೋಡಿ. ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯನ್ನು ಮದುವೆಯಾಗಿ, ಆಕೆಯನ್ನು ಇಸ್ಲಾಮಿಗೆ ಮತಾಂತರಗೊಳಿಸಿ, ಬಳಿಕ ಆಕೆಗೆ ತ್ರಿವಳಿ ತಲಾಖ್ ನೀಡಿದರೆ ಅಥವಾ ಇನ್ನೊಂದು ಮದುವೆಯಾದರೆ ಅದು ಧರ್ಮಕ್ಕೆ ಮಾಡುವ ಸೇವೆ. ಆದರೆ ಮುಸ್ಲಿಂ ಮಹಿಳೆ ಹಿಂದೂಗಳನ್ನು ಮದುವೆಯಾದರೆ ಅಥವಾ ಪ್ರೀತಿಸಿದರೆ ಅದು ಧರ್ಮದ್ರೋಹ.

ಇಂತಹ ಧರ್ಮದ್ರೋಹದ ಪ್ರಕರಣವೊಂದು ಉತ್ತರ ಪ್ರದೇಶದಲ್ಲಿ ನಡೆದಿದ್ದು, ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಪ್ರೀತಿಸಿ, ಆತನನ್ನು ಮದುವೆಯೂ ಆಗಿ ಈಗ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದು ಕುಟುಂಬಸ್ಥರನ್ನು ಕೆರಳಿದೆ. ಅಲ್ಲದೆ ಜೀವಬೆದರಿಕೆ ಸಹ ಒಡ್ಡುತ್ತಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.

ಉತ್ತರ ಪ್ರದೇಶದ ಅಲಿಗಡದ ಗಬಾನಾ ಎಂಬ ಪ್ರದೇಶದ ನಿವಾಸಿಯಾಗಿದ್ದ ನಸ್ರೀನ್, ಹಿಂದೂ ಯುವಕ ಮನ್ವೇಂದ್ರ ಕುಮಾರ್ ಎಂಬಾತನನ್ನು ಪ್ರೀತಿಸಿದ್ದಳು. ಪ್ರೀತಿ ಗಾಢವಾಗುತ್ತಲೇ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದಕ್ಕೆ ಯುವತಿಯ ಕುಟುಂಬಸ್ಥರು ಒಪ್ಪಿಲ್ಲ. ಆದರೂ ಪ್ರೀತಿಯನ್ನೇ ಉಳಿಸಿಕೊಳ್ಳಲು ಮುಂದಾದ ನಸ್ರೀನ್ ಹಾಗೂ ಮನ್ವೇಂದ್ರ ಕುಮಾರ್ ಕಳೆದ ಫೆ.4ರಂದು ಮದುವೆಯಾಗಿದ್ದಾರೆ.

ಆದರೆ ನಸ್ರೀನ್ ಹಿಂದೂ ಯುವಕನನ್ನು ಮದುವೆಯಾಗಿದ್ದಲ್ಲದೇ, ಹಿಂದೂ ಧರ್ಮಕ್ಕೆ ಮದುವೆಯಾಗಿದ್ದು ಕುಟುಂಬಸ್ಥರನ್ನು ಕೆರಳಿಸಿದ್ದು, ಗಂಡ-ಹೆಂಡತಿ ಇಬ್ಬರನ್ನೂ ಜೀವಂತವಾಗಿ ಸುಡುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ. ಹಾಗಾಗಿ ದಂಪತಿ ಭದ್ರತೆ ಒದಗಿಸುವಂತೆ ಪೊಲೀಸರು ಹಾಗೂ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಅಂಕಿತ್ ಸಕ್ಸೇನಾ ಎಂಬ ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಕಾರಣ ಕೊಲೆಗೀಡಾಗಿದ್ದ. ನನ್ನ ಕುಟುಂಬಸ್ಥರೇ ಪ್ರಿಯಕರನನ್ನು ಕೊಂದಿದ್ದಾನೆ ಎಂದು ಯುವತಿಯೇ ಆರೋಪಿಸಿದ್ದಳು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಸುದ್ದಿಯಾಗಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search