• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಮಿಗೆ ಮತಾಂತರವಾಗು ಎಂದು ಬೆದರಿಕೆಯೊಡ್ಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ದಲಿತ ವ್ಯಕ್ತಿ!

TNN Correspondent Posted On February 13, 2018
0


0
Shares
  • Share On Facebook
  • Tweet It

ಲಖನೌ: ದಿನೇದಿನೆ ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳಿಗೆ ಹಿಂದೂ ಯುವತಿಯರ ಜೀವನ ನರಕವಾಗುತ್ತಿರುವ ಬೆನ್ನಲ್ಲೇ, ಇಸ್ಲಾಂ ಮೂಲಭೂತವಾದ ಮತ್ತಷ್ಟು ಅಟ್ಟಹಾಸ ಮೆರೆಯುತ್ತಿದ್ದು, ಮತಾಂತರವಾಗು ಎಂದು ಬೆದರಿಕೆಯೊಟ್ಟಿದ್ದಕ್ಕೆ ಉತ್ತರಪ್ರದೇಶದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮುಜಾಫರ್ ನಗರ ಜಿಲ್ಲೆಯ ಕಾಕಡಾ ಎಂಬ ಗ್ರಾಮದ ಸುದೇಶ್ ಕುಮಾರ್ ಎಂಬ ದಲಿತ ವ್ಯಕ್ತಿಗೆ ಹಲವು ದಿನಗಳಿಂದ ಕೆಲವು ಪ್ರಭಾವಿ ಮುಸ್ಲಿಂ ವ್ಯಕ್ತಿಗಳು ಇಸ್ಲಾಮಿಗೆ ಮತಾಂತರವಾಗು ಎಂದು ಬೆದರಿಕೆ ಹಾಕಿದ್ದಲ್ಲದೆ, ಆತನ ಜಮೀನು ವಶಕ್ಕೆ ಪಡೆದಿದ್ದರು. ಇದರಿಂದ ಮನನೊಂದ ಆತ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮತಾಂತರಕ್ಕಾಗಿ ಬೆದರಿಕೆ ಹಾಗೂ ಜಮೀನು ವಶಪಡಿಸಿಕೊಂಡ ಕಾರಣ ಸುದೇಶ್ ಕುಮಾರ್ ಹಾಗೂ ಆತನ ಕುಟುಂಬಸ್ಥರು ಸೇರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಎದುರು ಫೆಬ್ರವರಿ 10ರಂದು ಪ್ರತಿಭಟನೆ ನಡೆಸಿದ್ದರು. ಆದರೂ ಶೀಘ್ರ ನ್ಯಾಯ ಸಿಗದ ಕಾರಣ ಹಾಗೂ ಒತ್ತಡ ಸಹಿಸದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದಲ್ಲಿ ಸುದೇಶ್ ಕುಮಾರ್ ವಿರುದ್ಧವೇ ಪ್ರಕರಣ ದಾಖಲಾಗಿದ್ದು ಸಹ ಆತ್ಮಹತ್ಯೆಗೆ ಕಾರಣ ಎಂಬ ಮಾತು ಕೇಳುತ್ತಿವೆ. ಆದಾಗ್ಯೂ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಮ್ಯಾಜಿಸ್ಟ್ರೇಟ್ ವೈಭವ್ ಮಿಶ್ರಾ ತಿಳಿಸಿದ್ದಾರೆ.

ಪೊಲೀಸರು ಹಾಗೂ ಮ್ಯಾಜಿಸ್ಟ್ರೇಟ್ ಅವರಿಂದ ನ್ಯಾಯ ಸಿಗುವ ಭರವಸೆ ಕಳೆದುಕೊಂಡಿದ್ದ ಸುದೇಶ್ ಕುಮಾರ್ ಇತ್ತೀಚೆಗೆ ಖಿನ್ನನಾಗಿದ್ದ. ಈ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೂ ಪತ್ರ ಬರೆದಿದ್ದ. ಆದರೆ ಸಿಎಂರಿಂದ ಪ್ರತಿಕ್ರಿಯೆ ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇತ್ತೀಚೆಗಷ್ಟೇ ಉತ್ತರಪ್ರದೇಶದಲ್ಲಿ ಕೆಲವು ಮುಸ್ಲಿಂ ಯುವಕರು ದಲಿತ ಮಹಿಳೆ ಮುಖ್ಯಸ್ಥೆಯಾಗಿದ್ದ ಕುಟುಂಬದ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದ್ದಲ್ಲದೆ, ಅವರ ಮನೆ ಕೆಡವಿ ಉದ್ಧಟತನ ಮಾಡಿದ್ದ ಪ್ರಕರಣ ಮರೆಮಾಚುವ ಮುನ್ನವೇ ಮತ್ತೊಂದು ಇಂಥಾದ್ದೇ ಪ್ರಕರಣ ದಲಿತ ವ್ಯಕ್ತಿಯೊಬ್ಬನ ಪ್ರಾಣವನ್ನೇ ಬಲಿಪಡೆದಿದ್ದು ದುರಂತವೇ ಸರಿ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search